ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನೂ
ಯಾವ ಬೃಂದಾವನವು ಸೆಳೆಯಿತೋ ನಿನ್ನ ಮಣ್ಣಿನ ಕಣ್ಣನು
ಯಾವ ಬೃಂದಾವನವು ಚಾಚಿತೋ ತನ್ನ ಮಿಂಚಿನ ಕಯ್ಯನು
ಹೂವು ಹಾಸಿಗೆ ಚಂದ್ರ ಚಂದನ, ಬಾಹು ಬಂಧನ, ಚುಂಬನ
ಬಯಕೆ ತೋಟದ ಬೇಲಿಯೊಳಗೆ, ಕರಣ ಗಣದೀ ರಿಂಗಣಾ
ಸಪ್ತ ಸಾಗರದಾಚೆಯೆಲ್ಲೋ ಸುಪ್ತ ಸಾಗರ ಕಾದಿದೆ
ಮುಲೆಯದಲೆಗಳ ಮೂಕ ಮರ್ಮರ ಇಂದು ಇಲ್ಲಿಗೂ ಹಾಯಿತೇ
ವಿವಶವಾಯಿತು ಪ್ರಾಣ: ಪರವಶವು ನಿನ್ನೀ ಚೇತನ
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ...
ರಚನೆ : ಗೋಪಾಲ ಕೃಷ್ಣ ಅಡಿಗ